Friday, July 17, 2026
Friday, July 17, 2026

ಛತ್ತೀಸ್‌ಗಢದಲ್ಲಿ ದೇಶದ ಮೊದಲ ಹಾರ್ನ್‌ಬಿಲ್ ಸಫಾರಿ

ಉದಂತಿ-ಸೀತಾನದಿ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಆರಂಭವಾದ ದೇಶದ ಮೊದಲ ಹಾರ್ನ್‌ಬಿಲ್ ಸಫಾರಿ.

ಛತ್ತೀಸ್‌ಗಢ ಸರಕಾರವು ರಾಜ್ಯದ ಜೀವ ವೈವಿಧ್ಯತೆ ಮತ್ತು ಪರಿಸರ ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡುವ ಉದ್ದೇಶದಿಂದ ಉದಂತಿ–ಸೀತಾನದಿ ಹುಲಿ ಸಂರಕ್ಷಿತ ಪ್ರದೇಶದಲ್ಲಿ ದೇಶದ ಮೊದಲ ಹಾರ್ನ್‌ಬಿಲ್ ಸಫಾರಿಯನ್ನು ಆರಂಭಿಸಲು ಮುಂದಾಗಿದೆ. ಈ ಯೋಜನೆಯಡಿ ಪ್ರವಾಸಿಗರಿಗೆ ಹಾರ್ನ್‌ಬಿಲ್ ಪಕ್ಷಿಗಳನ್ನು ಅವುಗಳ ನೈಸರ್ಗಿಕ ಆವಾಸದಲ್ಲೇ ವೀಕ್ಷಿಸುವ ವಿಶೇಷ ಅವಕಾಶ ಕಲ್ಪಿಸಲಾಗುತ್ತದೆ.

Untitled design (88)

ಹಾರ್ನ್‌ಬಿಲ್‌ಗಳು ಅರಣ್ಯ ಪರಿಸರ ವ್ಯವಸ್ಥೆಯ ಆರೋಗ್ಯವನ್ನು ಸೂಚಿಸುವ ಪ್ರಮುಖ ಪಕ್ಷಿಗಳಾಗಿದ್ದು, ಅವುಗಳ ಸಂರಕ್ಷಣೆ ಮತ್ತು ಅರಿವು ಮೂಡಿಸುವುದೇ ಈ ಸಫಾರಿಯ ಮುಖ್ಯ ಉದ್ದೇಶವಾಗಿದೆ. ಸ್ಥಳೀಯ ಸಮುದಾಯಗಳ ಭಾಗವಹಿಸುವಿಕೆಯಿಂದ ಪರಿಸರ ಸ್ನೇಹಿ ಪ್ರವಾಸೋದ್ಯಮವನ್ನು ಅಭಿವೃದ್ಧಿಪಡಿಸುವ ಜತೆಗೆ, ಉದ್ಯೋಗಾವಕಾಶಗಳನ್ನು ಸೃಷ್ಟಿಸುವ ಗುರಿಯನ್ನೂ ಹೊಂದಿದೆ.

ಈ ಸಫಾರಿ ಆರಂಭವಾದ ಬಳಿಕ ಪ್ರಕೃತಿ ಪ್ರಿಯರು, ಪಕ್ಷಿ ವೀಕ್ಷಕರು ಹಾಗೂ ವನ್ಯಜೀವಿ ಛಾಯಾಗ್ರಾಹಕರಿಗೆ ಉದಂತಿ–ಸೀತಾನದಿ ಹುಲಿ ಸಂರಕ್ಷಿತ ಪ್ರದೇಶ ಮತ್ತೊಂದು ಆಕರ್ಷಕ ತಾಣವಾಗುವ ನಿರೀಕ್ಷೆಯಿದೆ. ಈ ಯೋಜನೆಯು ಛತ್ತೀಸ್‌ಗಢವನ್ನು ದೇಶದ ಪ್ರಮುಖ ಪರಿಸರ ಪ್ರವಾಸೋದ್ಯಮ ತಾಣವಾಗಿ ರೂಪಿಸುವತ್ತ ಮಹತ್ವದ ಹೆಜ್ಜೆಯಾಗಿದೆ.

Admin

Admin

Pravasi Prapancha – A pioneering initiative led by Vishweshwar Bhat, the esteemed journalist and head of the Vishwavani Group. It is the first and only travel-focused publication in Kannada journalism, dedicated exclusively to news, information, and travel narratives about various destinations. The digital media counterpart of this venture is Pravasi Prapancha Digital Channel, which brings travel-related news from across the state, country, and world. It features fascinating insights, traveler experiences, interviews related to travel, entertainment segments, and much more. Editor-in-Chief: Shri Vishweshwar Bhat

ಮೇ 1 ರಿಂದ ವಿದೇಶಿ ಪ್ರವಾಸಿಗರಿಗೆ ಥಾಯ್ಲೆಂಡ್‌ನಲ್ಲಿ ಡಿಜಿಟಲ್ ಆಗಮನ ಕಾರ್ಡ್ ಕಡ್ಡಾಯ

Read Previous

ಮೇ 1 ರಿಂದ ವಿದೇಶಿ ಪ್ರವಾಸಿಗರಿಗೆ ಥಾಯ್ಲೆಂಡ್‌ನಲ್ಲಿ ಡಿಜಿಟಲ್ ಆಗಮನ ಕಾರ್ಡ್ ಕಡ್ಡಾಯ

ಗೋವಾ ಹೋದರೆ ಈ ಬೀಚ್‌ಗಳನ್ನು ಮಿಸ್‌ ಮಾಡಿಕೊಳ್ಳಲೇಬೇಡಿ!

Read Next

ಗೋವಾ ಹೋದರೆ ಈ ಬೀಚ್‌ಗಳನ್ನು ಮಿಸ್‌ ಮಾಡಿಕೊಳ್ಳಲೇಬೇಡಿ!