Friday, May 8, 2026
Friday, May 8, 2026

ಹಜ್‌ ಯಾತ್ರೆಯ ವಿಮಾನ ದರ ಏರಿಕೆ

ಸೌದಿ ಅರೇಬಿಯಾದ ಪವಿತ್ರ ನಗರವಾದ ಮೆಕ್ಕಾಗೆ ಪ್ರಯಾಣಿಸುವ ಯಾತ್ರಿಕರಿಗೆ ವಿಮಾನ ದರಗಳಲ್ಲಿ ಒಂದು ಬಾರಿ ಪರಿಷ್ಕರಣೆ ಮಾಡುವುದಾಗಿ ತಿಳಿಸಿದೆ. ಮಧ್ಯಪ್ರಾಚ್ಯದಲ್ಲಿ ಯುದ್ಧದ ಪರಿಸ್ಥಿತಿಯಿಂದಾಗಿ ವಿಮಾನಯಾನ ಟರ್ಬೈನ್ ಇಂಧನ ಬೆಲೆಗಳಲ್ಲಿ ತೀವ್ರ ಏರಿಕೆ ಕಂಡುಬಂದಿರುವುದರಿಂದ, ಮೂಲ ದರ ಪರಿಷ್ಕರಣೆಗಾಗಿ ವಿಮಾನಯಾನ ಸಂಸ್ಥೆಗಳಿಂದ ಒತ್ತಾಯ ಕೇಳಿಬಂದಿತ್ತು. ಇದನ್ನು ಗಮನದಲ್ಲಿಟ್ಟುಕೊಂಡು ನಿರ್ಧಾರ ಕೈಗೊಳ್ಳಲಾಗಿದೆ ಎಂದು ಸುತ್ತೋಲೆಯಲ್ಲಿ ತಿಳಿಸಲಾಗಿದೆ.

ಜೆಟ್‌ ಇಂಧನ ಬೆಲೆ ಏರಿಕೆ ಹಿನ್ನೆಲೆಯಲ್ಲಿ ಈ ವರ್ಷ ಹಜ್ ಸಮಿತಿಯು ಪ್ರತಿ ಯಾತ್ರಿಕರಿಗೆ 10,000 ರೂ.ಗಳಷ್ಟು ವಿಮಾನ ದರವನ್ನು ಹೆಚ್ಚಿಸುವ ನಿರ್ಧಾರ ಕೈಗೊಂಡಿದೆ. ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಹೋರಾಟ, ಅಮೆರಿಕ ಮತ್ತು ಇಸ್ರೇಲ್‌ನ ಇರಾನ್ ವಿರುದ್ಧದ ಯುದ್ಧ, ವಿಶ್ವಾದ್ಯಂತ ಕಚ್ಚಾ ತೈಲ ಪೂರೈಕೆ ವ್ಯವಸ್ಥೆಯನ್ನೇ ಬುಡಮೇಲು ಮಾಡಿದೆ. ಈ ಹಿನ್ನೆಲೆಯಲ್ಲಿ ದರ ಏರಿಕೆಯನ್ನು ಸರಕಾರ ಸಮರ್ಥಿಸಿಕೊಂಡಿದೆ.ಅಲ್ಪಸಂಖ್ಯಾತ ವ್ಯವಹಾರಗಳ ಸಚಿವಾಲಯದ ಅಡಿಯಲ್ಲಿರುವ ಶಾಸನಬದ್ಧ ಸಂಸ್ಥೆಯಾದ ಹಜ್ ಸಮಿತಿಯು, ‘ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಬಿಕ್ಕಟ್ಟಿನಿಂದ ಉಂಟಾಗುವ ಅಸಾಧಾರಣ ಸಂದರ್ಭಗಳು’ ಎಂದು ಉಲ್ಲೇಖಿಸುವ ಸುತ್ತೋಲೆಯನ್ನು ಹೊರಡಿಸಿದೆ.

ಇದನ್ನೂ ಓದಿ: ಬೀದರ್‌-ಬೆಂಗಳೂರು ವಿಮಾನ ಸೇವೆ ಪುನರಾರಂಭ

ಸೌದಿ ಅರೇಬಿಯಾದ ಪವಿತ್ರ ನಗರವಾದ ಮೆಕ್ಕಾಗೆ ಪ್ರಯಾಣಿಸುವ ಯಾತ್ರಿಕರಿಗೆ ವಿಮಾನ ದರಗಳಲ್ಲಿ ಒಂದು ಬಾರಿ ಪರಿಷ್ಕರಣೆ ಮಾಡುವುದಾಗಿ ತಿಳಿಸಿದೆ. ಮಧ್ಯಪ್ರಾಚ್ಯದಲ್ಲಿ ಯುದ್ಧದ ಪರಿಸ್ಥಿತಿಯಿಂದಾಗಿ ವಿಮಾನಯಾನ ಟರ್ಬೈನ್ ಇಂಧನ ಬೆಲೆಗಳಲ್ಲಿ ತೀವ್ರ ಏರಿಕೆ ಕಂಡುಬಂದಿರುವುದರಿಂದ, ಮೂಲ ದರ ಪರಿಷ್ಕರಣೆಗಾಗಿ ವಿಮಾನಯಾನ ಸಂಸ್ಥೆಗಳಿಂದ ಒತ್ತಾಯ ಕೇಳಿಬಂದಿತ್ತು. ಇದನ್ನು ಗಮನದಲ್ಲಿಟ್ಟುಕೊಂಡು ನಿರ್ಧಾರ ಕೈಗೊಳ್ಳಲಾಗಿದೆ ಎಂದು ಸುತ್ತೋಲೆಯಲ್ಲಿ ತಿಳಿಸಲಾಗಿದೆ.

ಈ ವರ್ಷ ಪ್ರಯಾಣ ಬೆಳೆಸಲು ಬಯಸುವವರು ಮೇ 15 ರೊಳಗೆ ಹೆಚ್ಚುವರಿ ಮೊತ್ತವನ್ನು ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು ಎಕ್ಸ್ ಪೋಸ್ಟ್‌ನಲ್ಲಿ ದರ ಏರಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ. ‘ಅಸಂಖ್ಯಾತ ಕುಟುಂಬಗಳಿಗೆ ವರ್ಷಕ್ಕೊಮ್ಮೆ ಪವಿತ್ರ ಹಜ್‌ ಯಾತ್ರೆ ಮಾಡುವ ಆಸೆ ಇರುತ್ತದೆ. ಆ ಭಾವನೆಯನ್ನು ನಾನು ಗೌರವಿಸುತ್ತೇನೆ. ಆದರೆ, ಪ್ರಸ್ತುತ ನಡೆಯುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳಿಂದಾಗಿ ಎಟಿಎಫ್ ಬೆಲೆಗಳಲ್ಲಿ ಜಾಗತಿಕವಾಗಿ ತೀವ್ರ ಏರಿಕೆ ಕಂಡುಬಂದಿದೆ. ವಿಮಾನಯಾನ ಸಂಸ್ಥೆಗಳು ಪ್ರತಿ ಯಾತ್ರಿಕರಿಗೆ ಅಂದಾಜು 28,459–37,945 ರೂ. ತೀವ್ರ ಏರಿಕೆಯನ್ನು ಬಯಸಿವೆ. ಎಟಿಎಫ್ ಬೆಲೆಗಳ ಏರಿಕೆಗೆ ನಾವು ವಿಮಾನಯಾನ ಸಂಸ್ಥೆಗಳನ್ನು ದೂಷಿಸಲು ಸಾಧ್ಯವಿಲ್ಲ ಎಂದು ತಿಳಿಸಿದ್ದಾರೆ

Admin

Admin

Pravasi Prapancha – A pioneering initiative led by Vishweshwar Bhat, the esteemed journalist and head of the Vishwavani Group. It is the first and only travel-focused publication in Kannada journalism, dedicated exclusively to news, information, and travel narratives about various destinations. The digital media counterpart of this venture is Pravasi Prapancha Digital Channel, which brings travel-related news from across the state, country, and world. It features fascinating insights, traveler experiences, interviews related to travel, entertainment segments, and much more. Editor-in-Chief: Shri Vishweshwar Bhat

ಮೇ 1 ರಿಂದ ವಿದೇಶಿ ಪ್ರವಾಸಿಗರಿಗೆ ಥಾಯ್ಲೆಂಡ್‌ನಲ್ಲಿ ಡಿಜಿಟಲ್ ಆಗಮನ ಕಾರ್ಡ್ ಕಡ್ಡಾಯ

Read Previous

ಮೇ 1 ರಿಂದ ವಿದೇಶಿ ಪ್ರವಾಸಿಗರಿಗೆ ಥಾಯ್ಲೆಂಡ್‌ನಲ್ಲಿ ಡಿಜಿಟಲ್ ಆಗಮನ ಕಾರ್ಡ್ ಕಡ್ಡಾಯ

ಬೇಸಿಗೆಯ ಪ್ರವಾಸಕ್ಕಿದು ಸೂಕ್ತ ಸಮಯ; ತೆರಳುವ ಮುನ್ನ ಪೊಲೀಸರ ಈ ಸಲಹೆಗಳನ್ನು ಪಾಲಿಸಿ

Read Next

ಬೇಸಿಗೆಯ ಪ್ರವಾಸಕ್ಕಿದು ಸೂಕ್ತ ಸಮಯ; ತೆರಳುವ ಮುನ್ನ ಪೊಲೀಸರ ಈ ಸಲಹೆಗಳನ್ನು ಪಾಲಿಸಿ