ಭಾರತದ ರಾಷ್ಟ್ರೀಯ ಹೆದ್ದಾರಿಗಳಲ್ಲಿ ರಸ್ತೆ ಸುರಕ್ಷತೆಯನ್ನು ಹೆಚ್ಚಿಸಲು ಮತ್ತು ಮೂಲಸೌಕರ್ಯಗಳನ್ನು ರಕ್ಷಿಸಲು ಕೇಂದ್ರ ಸರಕಾರವು ಅತಿಯಾದ ಭಾರಿ ವಾಹನಗಳ ವಿರುದ್ಧ ಕಠಿಣ ನಿಯಮಗಳನ್ನು ಜಾರಿಗೆ ತರುತ್ತಿದೆ. ಹೊಸ ನಿಯಮಗಳ ಪ್ರಕಾರ, ನಿಗದಿತ ಮಿತಿಗಿಂತ ಹೆಚ್ಚು ಭಾರ ಹೊತ್ತ ವಾಹನಗಳಿಗೆ ಭಾರಿ ದಂಡ ವಿಧಿಸಲಾಗುತ್ತದೆ ಮತ್ತು ಅಂಥ ವಾಹನಗಳನ್ನು ಹೆದ್ದಾರಿಗಳಲ್ಲಿ ಸಂಚರಿಸದಂತೆ ತಡೆಯಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುತ್ತದೆ.

ಇದನ್ನೂ ಓದಿ: ರಾಷ್ಟ್ರೀಯ ಹೆದ್ದಾರಿ 45ರಲ್ಲಿ ಕೆಂಪು ರಸ್ತೆ

ಅತಿಯಾದ ಭಾರ ಹೇರಿದ ಲಾರಿ ಮತ್ತು ಟ್ರಕ್‌ಗಳು ರಸ್ತೆಗಳ ಗುಣಮಟ್ಟವನ್ನು ಶೀಘ್ರವಾಗಿ ಹಾಳುಮಾಡುತ್ತವೆ. ಇದರಿಂದ ಹೆದ್ದಾರಿಗಳಲ್ಲಿ ಗುಂಡಿಗಳು ಸೃಷ್ಟಿಯಾಗಿ ಸಂಚಾರಕ್ಕೆ ಅಡ್ಡಿಯಾಗುತ್ತದೆ. ರಸ್ತೆಗಳ ಆಯಸ್ಸನ್ನು ಹೆಚ್ಚಿಸಲು ಮತ್ತು ನಿರ್ವಹಣಾ ವೆಚ್ಚವನ್ನು ತಗ್ಗಿಸಲು ಈ ನಿಯಮಗಳು ಸಹಕಾರಿಯಾಗಲಿವೆ.

ಹೊಸ ವ್ಯವಸ್ಥೆಯಡಿ, ಹೆದ್ದಾರಿಗಳಲ್ಲಿ 'ವೇ-ಇನ್-ಮೋಷನ್' ತಂತ್ರಜ್ಞಾನವನ್ನು ಅಳವಡಿಸಲಾಗುತ್ತಿದೆ. ಇದು ವಾಹನಗಳು ಚಲಿಸುತ್ತಿರುವಾಗಲೇ ಅವುಗಳ ತೂಕವನ್ನು ಪತ್ತೆಹಚ್ಚುವ ಸಾಮರ್ಥ್ಯ ಹೊಂದಿದೆ. ಇದರಿಂದ ಟೋಲ್ ಪ್ಲಾಜಾಗಳಲ್ಲಿ ವಾಹನಗಳನ್ನು ನಿಲ್ಲಿಸಿ ತೂಕ ಮಾಡುವ ಅವಶ್ಯಕತೆ ಇರುವುದಿಲ್ಲ, ಇದು ಸಂಚಾರ ದಟ್ಟಣೆಯನ್ನು ಕಡಿಮೆ ಮಾಡಲು ನೆರವಾಗುತ್ತದೆ. ನಿಯಮ ಉಲ್ಲಂಘಿಸುವ ವಾಹನಗಳ ಮಾಲೀಕರಿಗೆ ಡಿಜಿಟಲ್ ರೂಪದಲ್ಲಿ ದಂಡದ ನೋಟಿಸ್ ತಲುಪಿಸುವ ವ್ಯವಸ್ಥೆಯನ್ನು ಜಾರಿಗೆ ತರಲಾಗುತ್ತಿದೆ.

ಸಾರಿಗೆ ಸಂಸ್ಥೆಗಳು ಮತ್ತು ವಾಹನ ಮಾಲೀಕರು ಸರ್ಕಾರದ ಮಾರ್ಗಸೂಚಿಗಳನ್ನು ಪಾಲಿಸಬೇಕು ಎಂದು ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ. ನಿಯಮಗಳ ಉಲ್ಲಂಘನೆಯು ಕೇವಲ ದಂಡಕ್ಕೆ ಸೀಮಿತವಾಗದೆ, ಪರವಾನಗಿ ರದ್ದತಿಯಂಥ ಗಂಭೀರ ಕ್ರಮಗಳಿಗೂ ಕಾರಣವಾಗಬಹುದು ಎಂದು ಎಚ್ಚರಿಸಲಾಗಿದೆ.