Monday, August 24, 2026
Monday, August 24, 2026

ಭಾರತ–ಇಟಲಿ ಸಾಂಸ್ಕೃತಿಕ ಬಾಂಧವ್ಯದ ಪ್ರತೀಕ ‘ತಾಯಿಯೊಬ್ಬಳು, ಮಾತೃಭಾಷೆ ಹಲವು’ ಪ್ರದರ್ಶನ: ಕೆ.ಜೆ. ಜಾರ್ಜ್‌

ಬೆಂಗಳೂರು ತಂತ್ರಜ್ಞಾನ ಮತ್ತು ನವೋದ್ಯಮದ ಕೇಂದ್ರ ಮಾತ್ರವಲ್ಲ; ಕಲೆ, ಪರಂಪರೆ ಮತ್ತು ಸಾಂಸ್ಕೃತಿಕ ಸಂವಾದಕ್ಕೂ ಪ್ರಮುಖ ಕೇಂದ್ರವಾಗಿ ಬೆಳೆಯುತ್ತಿದೆ. ಇಂಥ ಅಂತಾರಾಷ್ಟ್ರೀಯ ಪ್ರದರ್ಶನಗಳು ಬೆಂಗಳೂರಿನ ಜಾಗತಿಕ ಸಾಂಸ್ಕೃತಿಕ ಪ್ರವಾಸೋದ್ಯಮದ ಸ್ಥಾನಮಾನವನ್ನು ಮತ್ತಷ್ಟು ಬಲಪಡಿಸುತ್ತವೆ ಎಂದು ಸಚಿವರು ಹೇಳಿದರು.ಕರ್ನಾಟಕವು 500ಕ್ಕೂ ಹೆಚ್ಚು ಕೇಂದ್ರ ಸಂರಕ್ಷಿತ ಸ್ಮಾರಕಗಳು ಹಾಗೂ ನಾಲ್ಕು ಯುನೆಸ್ಕೋ ವಿಶ್ವ ಪರಂಪರೆಯ ತಾಣಗಳನ್ನು ಹೊಂದಿದ್ದು, ರಾಜ್ಯದ ಶ್ರೀಮಂತ ಪರಂಪರೆಯನ್ನು ಸಾಂಸ್ಕೃತಿಕ ಪ್ರವಾಸೋದ್ಯಮದೊಂದಿಗೆ ಮತ್ತಷ್ಟು ಪರಿಣಾಮಕಾರಿಯಾಗಿ ಜೋಡಿಸುವ ಅಗತ್ಯವಿದೆ ಎಂದು ಕೆ.ಜೆ. ಜಾರ್ಜ್‌ ಅವರು ಹೇಳಿದರು.

ತಾಯಿ ಮತ್ತು ಮಗುವಿನ ನಡುವಿನ ಸಾರ್ವತ್ರಿಕ ಮಮತೆ ಹಾಗೂ ಕಾಳಜಿಯ ಭಾವನೆಯನ್ನು ಕೇಂದ್ರವಾಗಿಟ್ಟುಕೊಂಡು ಭಾರತ ಮತ್ತು ಇಟಲಿಯ ಕಲಾ ಪರಂಪರೆಯನ್ನು ಒಂದೇ ವೇದಿಕೆಯಲ್ಲಿ ಪರಿಚಯಿಸುವ ‘ತಾಯಿಯೊಬ್ಬಳು, ಮಾತೃಭಾಷೆ ಹಲವು’ ವಿಶೇಷ ಕಲಾ ಪ್ರದರ್ಶನವು ದೇಶಗಳ ನಡುವಿನ ಸಾಂಸ್ಕೃತಿಕ ಬಾಂಧವ್ಯವನ್ನು ಮತ್ತಷ್ಟು ಬಲಪಡಿಸಲಿದೆ ಎಂದು ಪ್ರವಾಸೋದ್ಯಮ ಸಚಿವ ಕೆ.ಜೆ. ಜಾರ್ಜ್‌ ಹೇಳಿದರು.ಬೆಂಗಳೂರಿನ ನ್ಯಾಷನಲ್‌ ಗ್ಯಾಲರಿ ಆಫ್‌ ಮಾಡರ್ನ್‌ ಆರ್ಟ್‌ (NGMA)ನಲ್ಲಿ ಆಯೋಜಿಸಲಾಗಿರುವ ಪ್ರದರ್ಶನವನ್ನು ಉದ್ಘಾಟಿಸಿ ಮಾತನಾಡಿದ ಸಚಿವರು, ವಿಭಿನ್ನ ಭಾಷೆ, ಭೌಗೋಳಿಕತೆ ಮತ್ತು ಕಾಲಘಟ್ಟಗಳ ಕಲಾ ಪರಂಪರೆಗಳನ್ನು ಒಟ್ಟುಗೂಡಿಸಿರುವುದು ಈ ಪ್ರದರ್ಶನದ ವಿಶೇಷತೆ ಎಂದರು. ಬೆಂಗಳೂರು ತಂತ್ರಜ್ಞಾನ ಮತ್ತು ನವೋದ್ಯಮದ ಕೇಂದ್ರ ಮಾತ್ರವಲ್ಲ; ಕಲೆ, ಪರಂಪರೆ ಮತ್ತು ಸಾಂಸ್ಕೃತಿಕ ಸಂವಾದಕ್ಕೂ ಪ್ರಮುಖ ಕೇಂದ್ರವಾಗಿ ಬೆಳೆಯುತ್ತಿದೆ. ಇಂಥ ಅಂತಾರಾಷ್ಟ್ರೀಯ ಪ್ರದರ್ಶನಗಳು ಬೆಂಗಳೂರಿನ ಜಾಗತಿಕ ಸಾಂಸ್ಕೃತಿಕ ಪ್ರವಾಸೋದ್ಯಮದ ಸ್ಥಾನಮಾನವನ್ನು ಮತ್ತಷ್ಟು ಬಲಪಡಿಸುತ್ತವೆ ಎಂದು ಸಚಿವರು ಹೇಳಿದರು.ಕರ್ನಾಟಕವು 500ಕ್ಕೂ ಹೆಚ್ಚು ಕೇಂದ್ರ ಸಂರಕ್ಷಿತ ಸ್ಮಾರಕಗಳು ಹಾಗೂ ನಾಲ್ಕು ಯುನೆಸ್ಕೋ ವಿಶ್ವ ಪರಂಪರೆಯ ತಾಣಗಳನ್ನು ಹೊಂದಿದ್ದು, ರಾಜ್ಯದ ಶ್ರೀಮಂತ ಪರಂಪರೆಯನ್ನು ಸಾಂಸ್ಕೃತಿಕ ಪ್ರವಾಸೋದ್ಯಮದೊಂದಿಗೆ ಮತ್ತಷ್ಟು ಪರಿಣಾಮಕಾರಿಯಾಗಿ ಜೋಡಿಸುವ ಅಗತ್ಯವಿದೆ ಎಂದು ಅವರು ಹೇಳಿದರು. 2027ರ ಭಾರತ–ಇಟಲಿ ಸಂಸ್ಕೃತಿ ಮತ್ತು ಪ್ರವಾಸೋದ್ಯಮ ವರ್ಷದ ಪೂರ್ವಭಾವಿಯಾಗಿ ಈ ಪ್ರದರ್ಶನ ವಿಶೇಷ ಮಹತ್ವ ಹೊಂದಿದೆ ಎಂದು ಸಚಿವರು ತಿಳಿಸಿದರು.

Untitled design (1)

ಕರ್ನಾಟಕ ಸರ್ಕಾರದ ಪ್ರವಾಸೋದ್ಯಮ ಇಲಾಖೆ, ಇಟಲಿಯ ಕಾನ್ಸುಲೇಟ್‌ ಜನರಲ್‌, ನ್ಯಾಷನಲ್‌ ಗ್ಯಾಲರಿ ಆಫ್‌ ಮಾಡರ್ನ್‌ ಆರ್ಟ್‌ ಹಾಗೂ ಇತರ ಸಹಭಾಗಿಗಳ ಸಹಕಾರದಿಂದ ಆಯೋಜಿಸಿರುವ ಈ ಪ್ರದರ್ಶನವು ಕರ್ನಾಟಕ ಹಾಗೂ ದಕ್ಷಿಣ ಭಾರತದ ಜನರಿಗೆ ವಿಶ್ವಮಟ್ಟದ ಕಲಾ ಅನುಭವವನ್ನು ಪರಿಚಯಿಸುವ ಅವಕಾಶವಾಗಿದೆ. ಪ್ರದರ್ಶನದಲ್ಲಿ ಇಟಲಿಯ ಪ್ರಸಿದ್ಧ ಪುನರುಜ್ಜೀವನ ಕಾಲದ ಕಲಾವಿದ ಸ್ಯಾಂಡ್ರೊ ಬೊಟಿಚೆಲ್ಲಿ ಅವರ ಮೂಲ ‘ಮಡೊನ್ನಾ ಅಂಡ್‌ ಚೈಲ್ಡ್‌’ ಕಲಾಕೃತಿಯ ಜತೆಗೆ ಪ್ರಾಚೀನ ಎಟ್ರಸ್ಕನ್‌ ಶಿಲ್ಪಗಳು, ಕುಷಾಣ ಕಾಲದ ‘ಹಾರಿತಿ’ ಶಿಲ್ಪಗಳು ಹಾಗೂ ರಾಜಸ್ಥಾನದ ‘ಸ್ಕಂದಮಾತಾ’ ಶಿಲ್ಪಗಳು ಸೇರಿದಂತೆ ಅಪರೂಪದ ಭಾರತೀಯ ಕಲಾ ಸಂಪತ್ತನ್ನು ಪ್ರದರ್ಶಿಸಲಾಗುತ್ತಿದೆ.

Admin

Admin

Pravasi Prapancha – A pioneering initiative led by Vishweshwar Bhat, the esteemed journalist and head of the Vishwavani Group. It is the first and only travel-focused publication in Kannada journalism, dedicated exclusively to news, information, and travel narratives about various destinations. The digital media counterpart of this venture is Pravasi Prapancha Digital Channel, which brings travel-related news from across the state, country, and world. It features fascinating insights, traveler experiences, interviews related to travel, entertainment segments, and much more. Editor-in-Chief: Shri Vishweshwar Bhat

ದೇಶ ಸುತ್ತಬೇಕಿಲ್ಲ, ಕರ್ನಾಟಕದಲ್ಲೇ ಇವೆ ಅನೇಕ ಡಾಲ್ಫಿನ್‌ ತಾಣಗಳು..

Read Previous

ದೇಶ ಸುತ್ತಬೇಕಿಲ್ಲ, ಕರ್ನಾಟಕದಲ್ಲೇ ಇವೆ ಅನೇಕ ಡಾಲ್ಫಿನ್‌ ತಾಣಗಳು..

ನೋಡಬನ್ನಿ ರಾಮನಗರ..ಇತಿಹಾಸವನ್ನು ಒಡಲಲ್ಲಿ  ಹೊತ್ತ ಬೆಟ್ಟಗಳ ತವರೂರ..

Read Next

ನೋಡಬನ್ನಿ ರಾಮನಗರ..ಇತಿಹಾಸವನ್ನು ಒಡಲಲ್ಲಿ ಹೊತ್ತ ಬೆಟ್ಟಗಳ ತವರೂರ..