ದಕ್ಷಿಣ ಕನ್ನಡ–ಉಡುಪಿ ಜಿಲ್ಲೆಗಳಲ್ಲಿ ಪ್ರವಾಸಿಗರ ಸಂಖ್ಯೆಯಲ್ಲಿ ಏರಿಕೆ!
ಉಡುಪಿ ಜಿಲ್ಲೆಯ ಕೃಷ್ಣಮಠ, ಕೊಲ್ಲೂರು ಮೂಕಾಂಬಿಕೆ ಸೇರಿದಂತೆ ವಿವಿಧ ಪುರಾತನ ಮತ್ತು ಧಾರ್ಮಿಕ ತಾಣಗಳಿಗೆ ಭಕ್ತರ ಸಂಖ್ಯೆ ಹೆಚ್ಚಾಗಿದ್ದು, ಅದೇ ವೇಳೆ ದಕ್ಷಿಣ ಕನ್ನಡ ಜಿಲ್ಲೆಯ ಪಣಂಬೂರು, ಸುರತ್ಕಲ್, ಸೋಮೇಶ್ವರ ಸೇರಿದಂತೆ ಹಲವು ಕಡಲತೀರಗಳಲ್ಲಿ ಪ್ರವಾಸಿಗರ ದಟ್ಟಣೆ ಹೆಚ್ಚಾಗಿದೆ. ವಿಶೇಷವಾಗಿ ವಾರಾಂತ್ಯಗಳು ಹಾಗೂ ರಜೆ ಅವಧಿಯಲ್ಲಿ ದೇಶದ ವಿವಿಧ ಭಾಗಗಳಿಂದ ಪ್ರವಾಸಿಗರು ಈ ಪ್ರದೇಶಗಳಿಗೆ ಆಗಮಿಸುತ್ತಿದ್ದಾರೆ.
ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಪ್ರವಾಸಿಗರ ಸಂಖ್ಯೆಯಲ್ಲಿ ಗಮನಾರ್ಹ ಏರಿಕೆ ಕಂಡುಬಂದಿದೆ. ಪ್ರಸಿದ್ಧ ದೇವಾಲಯಗಳು ಹಾಗೂ ಆಕರ್ಷಕ ಸಮುದ್ರತೀರಗಳು ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರನ್ನು ಸೆಳೆಯುತ್ತಿರುವುದು ಈ ಹೆಚ್ಚಳಕ್ಕೆ ಪ್ರಮುಖ ಕಾರಣವಾಗಿದೆ ಎಂದು ಪ್ರವಾಸೋದ್ಯಮ ವಲಯದವರು ತಿಳಿಸಿದ್ದಾರೆ.
ಉಡುಪಿ ಜಿಲ್ಲೆಯ ಕೃಷ್ಣಮಠ, ಕೊಲ್ಲೂರು ಮೂಕಾಂಬಿಕೆ ಸೇರಿದಂತೆ ವಿವಿಧ ಪುರಾತನ ಮತ್ತು ಧಾರ್ಮಿಕ ತಾಣಗಳಿಗೆ ಭಕ್ತರ ಸಂಖ್ಯೆ ಹೆಚ್ಚಾಗಿದ್ದು, ಅದೇ ವೇಳೆ ದಕ್ಷಿಣ ಕನ್ನಡ ಜಿಲ್ಲೆಯ ಪಣಂಬೂರು, ಸುರತ್ಕಲ್, ಸೋಮೇಶ್ವರ ಸೇರಿದಂತೆ ಹಲವು ಕಡಲತೀರಗಳಲ್ಲಿ ಪ್ರವಾಸಿಗರ ದಟ್ಟಣೆ ಹೆಚ್ಚಾಗಿದೆ. ವಿಶೇಷವಾಗಿ ವಾರಾಂತ್ಯಗಳು ಹಾಗೂ ರಜೆ ಅವಧಿಯಲ್ಲಿ ದೇಶದ ವಿವಿಧ ಭಾಗಗಳಿಂದ ಪ್ರವಾಸಿಗರು ಈ ಪ್ರದೇಶಗಳಿಗೆ ಆಗಮಿಸುತ್ತಿದ್ದಾರೆ.
ಪ್ರವಾಸಿಗರ ಸಂಖ್ಯೆ ಹೆಚ್ಚಳದಿಂದ ಸ್ಥಳೀಯ ಹೊಟೇೆಲ್, ಲಾಡ್ಜ್, ಹೋಮ್ಸ್ಟೇ, ಸಾರಿಗೆ ಮತ್ತು ವ್ಯಾಪಾರ ಕ್ಷೇತ್ರಗಳಿಗೆ ಲಾಭವಾಗುತ್ತಿದೆ. ಇದರಿಂದ ಸ್ಥಳೀಯ ಆರ್ಥಿಕತೆಗೆ ಚೈತನ್ಯ ಸಿಕ್ಕಿದ್ದು, ಉದ್ಯೋಗಾವಕಾಶಗಳೂ ಹೆಚ್ಚಾಗಿವೆ ಎಂದು ಪ್ರವಾಸೋದ್ಯಮ ಕ್ಷೇತ್ರದವರು ಅಭಿಪ್ರಾಯಪಟ್ಟಿದ್ದಾರೆ.
ಆದರೆ, ಪ್ರವಾಸಿಗರ ಹೆಚ್ಚುತ್ತಿರುವ ಸಂಖ್ಯೆಯನ್ನು ಸಮರ್ಥವಾಗಿ ನಿರ್ವಹಿಸಲು ಉತ್ತಮ ಮೂಲಸೌಕರ್ಯ, ಸಾರಿಗೆ ವ್ಯವಸ್ಥೆ, ಸ್ವಚ್ಛತೆ ಮತ್ತು ಭದ್ರತಾ ವ್ಯವಸ್ಥೆಗಳನ್ನು ಮತ್ತಷ್ಟು ಬಲಪಡಿಸುವ ಅಗತ್ಯವಿದೆ ಎಂದು ಸ್ಥಳೀಯ ಆಡಳಿತ ಹಾಗೂ ಪ್ರವಾಸೋದ್ಯಮ ತಜ್ಞರು ಸೂಚಿಸಿದ್ದಾರೆ.
ಮುಂದಿನ ದಿನಗಳಲ್ಲಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳು ರಾಜ್ಯದ ಪ್ರಮುಖ ಪ್ರವಾಸಿ ತಾಣವಾಗುವ ನಿರೀಕ್ಷೆ ವ್ಯಕ್ತವಾಗಿದೆ.